ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಿಸಿ – ಕರೆ ಕೊಟ್ಟ ಬಿಜೆಪಿ ಶಾಸಕ ರಾಜಾ ಸಿಂಗ್.

34
firstsuddi

ನಟಿ ಸಾಯಿ ಪಲ್ಲವಿ ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದಲ್ಲಿದ್ದಾಗ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಮರ ಮೇಲಿನ ಹಲ್ಲೆಗೂ ಹೋಲಿಸಿ ಮಾತನಾಡಿದ್ದರು. ಸಾಯಿ ಪಲ್ಲವಿ ಮಾತುಗಳಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಗೋವುಗಳನ್ನು ರಕ್ಷಿಸಿದ ರಕ್ಷಕರನ್ನು ಪಂಡಿತರನ್ನು ಕೊಂದ ಭಯೋತ್ಪಾದಕರಿಗೆ ಹೋಲಿಸುವುದು ಸರಿಯಲ್ಲ ಎಂಬ ವಾದ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ. ನಿನ್ನೆಯಷ್ಟೇ ಹೈದರಾಬಾದ್ ನಲ್ಲಿ ಇವರ ವಿರುದ್ಧ ದೂರು ದಾಖಲಾಗಿದೆ. ಇದೀಗ ತೆಲಂಗಾಣದ ಗೋಶಮಹಲ್ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್ ಕೂಡ ಕಿಡಿಕಾರಿದ್ದಾರೆ.

ತೆಲಂಗಾಣ ಸೇರಿದಂತೆ ಆಂಧ್ರಪ್ರದೇಶದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಾಯಿ ಪಲ್ಲವಿ ವಿರುದ್ಧ ದೂರು ನೀಡುವಂತೆ ಅವರು ಅಭಿಮಾನಿಗಳಿಗೆ ಕರೆಕೊಟ್ಟಿದ್ದಾರೆ. ಈ ಕುರಿತು ವಿಡಿಯೋ ಕೂಡ ಮಾಡಿ ಹಂಚಿಕೊಂಡಿದ್ದಾರೆ. ಹಿಂದೂಗಳ ಬಗ್ಗೆ ಮಾತನಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಹಿಂದೂಗಳನ್ನು ಬೈದರೆ ಪ್ರಚಾರ ಸಿಗುತ್ತದೆ ಎಂಬ ಭ್ರಮೆಯಲ್ಲಿ ಕೆಲವರು ಇದ್ದಾರೆ. ಅವರ ವಿರುದ್ಧ ದೂರು ದಾಖಲಿಸಿ, ಪಾಠ ಕಲಿಸಿ ಎಂದು ಕರೆಕೊಟ್ಟಿದ್ದಾರೆ.