ಮೈಸೂರು: ಸ್ನೇಹಿತನೊಬ್ಬನಿಗೆ ಕೊಡಿಸಿದ್ದ ಸಾಲವನ್ನು ಆತ ವಾಪಸ್ಸು ಕೊಡಲು ಹಿಂದೇಟು ಹಾಕಿದ್ದರಿಂದ ಮನನೊಂದು ವೀಡಿಯೋ ಮಾಡಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ವಿಶ್ವ (34), ಸುಷ್ಮ (28) ಎಂದು ಗುರುತಿಸಲಾಗಿದೆ. ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ವಿಶ್ವ ತನ್ನ ಸ್ನೇಹಿತ ಶಿವು ಎಂಬಾತನಿಗೆ ಬೇರೊಬ್ಬರಿಂದ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಈ ಸಾಲವನ್ನು ಶಿವು ತೀರಿಸಿರಲಿಲ್ಲ. ಸಾಲಕೊಟ್ಟವರು ಹಣ ಕೊಡುವಂತೆ ವಿಶ್ವನನ್ನು ಕೇಳುತ್ತಿದ್ದರು ಎಂದು ತಿಳಿದು ಬಂದಿದೆ.
ಇಷ್ಟೇ ಅಲ್ಲದೇ, ಚೋರನಹಳ್ಳಿ ರಾಜಣ್ಣ ಎಂಬಾತನಿಗೆ ವಿಶ್ವ, ತನ್ನ ಚಿನ್ನಾಭರಣ ಕೊಟ್ಟಿದ್ದ. ಆ ಚಿನ್ನವನ್ನು ಮರಳಿ ಕೊಡದೆ ಆತ ಸತಾಯಿಸಿದ್ದ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ದಂಪತಿ ಬೇಸತ್ತಿದ್ದರು. ಇದರಿಂದ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










