ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಬೊಮ್ಮಾಯಿ.

86
firstsuddi

ಹುಬ್ಬಳ್ಳಿ : ಹೃದಯಾಘಾತದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿನ್ನೆ ಇಹಲೋಕ ತ್ಯಜಿಸಿದ್ದರು. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ನಗರಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಸ್ನೇಹಿತನ ಪಾರ್ಥಿವ ಶರೀರ ಕಂಡು ಬಿಕ್ಕಿ ಬಿಕ್ಕಿ ಅತ್ತರು.

ಪತ್ನಿ, ಪುತ್ರ, ಪುತ್ರಿ ಸಹೋದರಿಯೊಂದಿಗೆ ಹುಬ್ಬಳ್ಳಿಗೆ ಆಗಮಿಸಿದ ಬೊಮ್ಮಾಯಿ ರಾಜು ಪಾಟೀಲ್ ಅವರ ಪತ್ನಿ ಹಾಗೂ ಕುಟುಂಬಸ್ಥರನ್ನು ಸಮಾಧಾನಪಡಿಸಿದರು.