ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ 7 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 7 ಕೊರೊನಾ ಪ್ರಕರಣಗಳಲ್ಲಿ 5ಮಂದಿ ಮೈಸೂರಿನ ನಂಜನಗೂಡಿನ ಕಾರ್ಖಾನೆಯ ಸಿಬ್ಬಂಧಿಗಳಾಗಿದ್ದು, ನಂಜನಗೂಡಿನಲ್ಲಿ ಮೊದಲ ಕೊರೊನಾ ಸೋಂಕಿತನಿಂದಲೇ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮೈಸೂರಿನ ಜನರಲ್ಲಿ ಆತಂಕ ಹೆಚ್ಚಾಗಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 7 ಹೊಸ #Covid19 ಪ್ರಕರಣಗಳು ಖಚಿತವಾಗಿತದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 214ಕ್ಕೆ ಏರಿದೆ. ಇದುವರೆಗೆ 37 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. #IndiaFightsCornona pic.twitter.com/M5MrNDpqxQ
— B Sriramulu (@sriramulubjp) April 11, 2020










