ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ದೇವರು ಮಗನ ಸಾವಿನ ಮೂಲಕ ಶಿಕ್ಷೆ ನೀಡಿದ್ದಾನೆ ಎಂಬ ಜನಾರ್ಧನ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಜನಾರ್ಧನ ರೆಡ್ಡಿ ಅವರ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದನ್ನು ನಾನು ಖಂಡಿಸುತ್ತೇನೆ. ಜನಾರ್ಧನ ರೆಡ್ಡಿ ಅವರು ಕೂಡಲೇ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೇಳಬೇಕು ಎಂದಿದ್ದಾರೆ










