ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದ್ದು, ಗಂಟೆಗೆ 100 ಕಿ.ಮೀ. ವೇಗದಲ್ಲಿ ಪಂಬನ್ -ಕಡಲೂರು ತೀರ ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ತಂಜಾವೂರು, ತಿರುವೂರು, ಕಡಲೂರು, ರಾಮನಾಥಪುರಂ, ನಾಗಪಟ್ಟಣಂ, ಪುದುಕೊಟ್ಟಾಯ್ ಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ತಮಿಳುನಾಡಿನ ಉತ್ತರ ಕರಾವಳಿ ಭಾಗದಲ್ಲಿ ಗಜ ಚಂಡಮಾರುತ ಅಪ್ಪಳಿಸಲಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.










