ವಿಷ ಪ್ರಸಾದ ದುರಂತ : ನಾಲ್ವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು…

204
firstsuddi

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ  ಕಿಚ್ಚುಗತ್ತಿ ಮಾರಮ್ಮನ ದೇವಾಲಯದ ವಿಷ  ಪ್ರಸಾದ ಪ್ರಕರಣಕ್ಕೆ  ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸಾಲೂರು ಕಿರಿಯಶ್ರೀ, ದೇವಾಲಯದ ಟ್ರಸ್ಟ್‌ ವ್ಯವಸ್ಥಾಪಕ ಮಾದೇಶ್ ಮತ್ತು ಮಾದೇಶ್​ ಪತ್ನಿ ಅಂಬಿಕಾ, ದೊಡ್ಡಯ್ಯ ಎಂಬುವವರನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು  ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.