ಬಾಗಲಕೋಟೆ: ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಅವರು ಎಲ್ಲೂ ಹೋಗಿಲ್ಲ. ಬೆಳಗಾವಿಯಲ್ಲೇ ಇದ್ದಾರೆ. ಅವರ ಫೋನ್ ಸ್ವಿಚ್ ಆಫ್ ಆಗಿದೆ ಅಷ್ಟೇ. ಸಚಿವ ಸ್ಥಾನ ಕೈತಪ್ಪಿದ್ದರಿಂದ ಸ್ವಲ್ಪ ಅಸಮಾಧಾನವಿರುತ್ತದೆ. ಎಲ್ಲವೂ ಸರಿಹೋಗುತ್ತದೆ ಎಂದಿದ್ದಾರೆ.










