ಬೆಂಗಳೂರು : ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಜಂಟಿ ಅಧಿವೇಶನಕ್ಕೆ ಸರ್ಕಾರದ 15 ಮಂದಿ ಶಾಸಕರು ಬಂದಿಲ್ಲ. ಸರ್ಕಾರಕ್ಕೆ ಬಹುಮತ ಇಲ್ಲ. ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಾವುದೇ ಜನಪರ ಕೆಲಸ ಮಾಡುತ್ತಿಲ್ಲ. ಸದನದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.










