ಸಂಸತ್​​ನಲ್ಲಿ ಆಪರೇಷನ್​ ಆಡಿಯೋ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಹಾಗೂ ಎಚ್‍.ಡಿ ದೇವೇಗೌಡ…

299
firstsuddi

ನವದೆಹಲಿ: ರಾಜ್ಯ ಆಪರೇಷನ್​ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮತ್ತು ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​​ ಖರ್ಗೆ ಅವರು ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಆಮಿಷ ವೊಡ್ಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್​​ ಖರ್ಗೆ ಅವರು ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮಾತನಾಡಿ ಮೊದಲ ಬಾರಿಗೆ 2009 ರಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಆಪರೇಷನ್​ ಕಮಲ ಆರಂಭಿಸಲಾಯಿತು. ಯಾವ ರಾಜ್ಯದಲ್ಲಿಯೂ ಇಂತಹ ಆಪರೇಷನ್​ಗಳು ಮಾಡುವುದು  ಬೇಡ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ತಿಳಿಸಿದ್ದಾರೆ.