ಯಾರೂ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುಬಾರದು:ಸಿಎಂ ಕುಮಾರಸ್ವಾಮಿ…

379
firstsuddi

ಬೆಂಗಳೂರು: ಹಾಸನದ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಬಾರದು. ಹಾಸನ ಡಿಸಿ, ಎಸ್.ಪಿ ಜೊತೆ ಮಾತನಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ನನಗಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುಬಾರದು ಎಂದು ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದಾರೆ.

firstsuddi