ಬೆಂಗಳೂರು: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಬಾಣಸವಾಡಿಯ ರಾಜ್ಕುಮಾರ್ ಪಾರ್ಕ್ನಲ್ಲಿ ನಡೆದಿದೆ. ಉದಯ್ ಕುಮಾರ್( 7) ಮೃತ ದುರ್ದೈವಿ. ಉದಯ್ ಕುಮಾರ್ ರಾಜ್ ಕುಮಾರ್ ಪಾರ್ಕ್ನಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










