ಬೆಂಗಳೂರು: ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರುಗಳಾದ ವಿ.ಮುನಿಯಪ್ಪ, ಕೆ.ಎ ತಿಪ್ಪೇಸ್ವಾಮಿ, ಕೋನರೆಡ್ಡಿ, ಡಾ. ಕೆ. ಶ್ರೀನಿವಾಸಮೂರ್ತಿ,ಡಾ. ದೇವಾನಂದ್ ಚೌಹಾಣ್ ಮತ್ತು ಎನ್.ಶ್ರೀನಿವಾಸ್ ಅವರುಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಪ್ರಮಾಣ ವಚನ ಬೋಧಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಡಿ.ರೇವಣ್ಣ, ಡಿ.ಕೆ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.










