ಸುಮಲತಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ …

147
firstsuddi

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಇಂದು ಸುಮಲತಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು ಗಂಡ ಸತ್ತು ತಿಂಗಳಾಗಿಲ್ಲ, ಆಗಲೇ ಸುಮಲತಾ ಅಂಬರೀಷ್ ರಾಜಕೀಯಕ್ಕೆ ಬಂದಿದ್ದಾರೆ. ಸುಮಲತಾ ಅವರು ಚಾಲೆಂಜ್ ಮಾಡಿದ್ದರಿಂದ ನಾವು ನಿಖಿಲ್ ನನ್ನು ಚುನಾವಣೆಗೆ ನಿಲ್ಲಿಸಿದ್ದು, ಇದಲ್ಲದಿದ್ದರೇ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುವ ಆಶಯವಿತ್ತು ಎಂದು ಹೇಳಿದ್ದಾರೆ.