ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ನಡೆಗೆ ಸಿಂಗಟಗೆರೆ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಹೇಶ್ ಒಡೆಯರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಿಂದ ಬಿಜೆಪಿಯತ್ತ ಮುಖ ಮಾಡಿದ್ದು, ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಜೊತೆ ಕ್ಷೇತ್ರದ ಒಡನಾಟ ಇಟ್ಟುಕೊಂಡಿದ್ದಾರೆ. ಕಳೆದ ವಿಧಾನಸಭೆಯಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜ್ಯ ನಾಯಕ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.










