ಚಿಕ್ಕಮಗಳೂರು : ಕೌಟುಂಬಿಕ ಕಲಹ ಹಿನ್ನೆಲೆ ತಾಯಿ-ಮಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ನಡೆದಿದ್ದು, ಸುಧಾ (55), ಸ್ವಪ್ನ (32) ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದ್ದು, ಸ್ವಪ್ನ ಅವರು ಅಜ್ಜಂಪುರ ಸಮೀಪದ ಗಿರಿಯಾಪುರ ಗ್ರಾಮದ ಜ್ಞಾನದೀಪ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










