ಕಳಸ : ರೋಟರಿ ಸಂಸ್ಥೆ ವತಿಯಿಂದ ಪಟ್ಟಣದ ಕೆಳಬಾಗಕ್ಕೆ ಸೋಲಾರ್ ದೀಪ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷ ಕಿರಣ್ ಶೆಟ್ಟಿ ಸಂಸ್ಥೆಯು ಪ್ರಸ್ತುತ ವರ್ಷದಲ್ಲಿ ಹಿರೇಬೈಲು ಪಟ್ಟಣಕ್ಕೆ ಸೋಲಾರ್ ದೀಪವನ್ನು ಅಳವಡಿಸಲಾಗಿದೆ. ಎಡೂರು ಗ್ರಾಮಕ್ಕೂ ಅಳವಡಿಸಲಾಗುತ್ತದೆ. ಸಂಸ್ಥೆ ಸಾರ್ವಜನಿಕರ ಅನುಕೂಲಕ್ಕಾಗಿ ಕೆಲವೊಂದು ಸವಲತ್ತುಗಳನ್ನು ನೀಡಲಾಗುತ್ತದೆ.ಆ ಸವಲತ್ತುಗಳ ಪ್ರಯೋಜನವನ್ನು ಪಡೆದುಕೊಂಡು ಅದನ್ನು ಕಾಪಾಡಿಕೊಂಡು ಬರುವ ಜವಾಬ್ದಾರಿ ಸಾರ್ವಜನಿಕರಿಗೆ ಇರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವರಾಮ ರಾಗೀಹಳ್ಳಿ,ಸತ್ಯನಾರಾಯಣ,ರೀತೇಶ್,ಮುರುಳಿ ಇತರರು ಇದ್ದರು.










