ಮಂಗಳೂರು : ಅತ್ತಾವರ ಮೆಡಿಕಲ್ ಕಾಲೇಜ್ ಬಳಿ ಇರುವ ಮನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಅಂಜನಾ ವಸಿಷ್ಟ ಎಂಬ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ

ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವಿಜಯಪುರ ಜಿಲ್ಲೆಯ ಸಂದೀಪ್ ರಾಠೋಡ್ ಎನ್ನಲಾಗಿದ್ದು, ಈತನನ್ನು ಮಂಗಳೂರಿಗೆ ಕರೆತರಲಾಗಿದ್ದು, ತನಿಖೆ ನಡೆಸಿದ ಮೇಲೆ ಯಾವ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎಂದು ತಿಳಿಯಬೇಕಿದೆ.










