ಚಿಕ್ಕಮಗಳೂರು : ಸಿದ್ದಾರ್ಥ್ ಅವರ ನಿಧನ ಹಿನ್ನೆಲೆ, ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿರ್ಮಲಾನಂದ ಸ್ವಾಮೀಜಿ…

1440
firstsuddi

ಚಿಕ್ಕಮಗಳೂರು : ಕಾಫಿ ಡೇ ಮಾಲಿಕ ಸಿದ್ದಾರ್ಥ್ ಅವರು ವಿಧಿವಶರಾದ ಹಿನ್ನೆಲೆ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿಯಲ್ಲಿ ಇರುವ ಸಿದ್ದಾರ್ಥ್ ಅವರ ಮನೆಗೆ ನಿರ್ಮಲಾನಂದ ಸ್ವಾಮೀಜಿ ಅವರು ಭೇಟಿ ನೀಡಿ ಸಿದ್ದಾರ್ಥ್ ಅವರ ತಾಯಿ ವಸಂತಿ ಹೆಗ್ಡೆ ಹಾಗೂ ಪತ್ನಿ ಮಾಳವಿಕಾ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.