ಮೂಡಿಗೆರೆ : ಕೊಡಗಿನ ಮಾದರಿಯಲ್ಲೇ ಮನೆಗಳನ್ನು ಕಟ್ಟಿಸಿಕೊಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ.

214
firstsuddi

ಮೂಡಿಗೆರೆ : ಮುರಾರ್ಜಿ ಶಾಲೆಯಲ್ಲಿ ಸಂತ್ರಸ್ತರನ್ನು ಭೇಟಿಯಾದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಾಲ್ಲೂಕಿನ ಆಲೇಖಾನ್ ಹೊರಟ್ಟಿ, ದುರ್ಗದಹಳ್ಳಿ ಸಂತ್ರಸ್ತರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದರು. ಕಳೆದ ವರ್ಷ ಇದೇ ಪರಿಸ್ಥಿತಿ ಕೊಡಗಿನಲ್ಲಿ ಉಂಟಾಗಿತ್ತು. ಆಗ ನಮ್ಮ ಸರ್ಕಾರ ಅಲ್ಲಿನ ಎಲ್ಲಾ ಸಂತ್ರಸ್ಥರಿಗೆ ಪುನರ್ ವಸತಿ ಕಲ್ಪಿಸಿತು. ಅದೇ ಮಾದರಿಯಲ್ಲಿ ಮನೆಯನ್ನು ಕಟ್ಟಿಸಿಕೊಡುವ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಂತ್ರಸ್ತರಿಗೆ ಅಭಯ ನೀಡಿದರು.