ಚಿಕ್ಕಮಗಳೂರು : ಜ.ಸಿ.ಐ ಚಿಕ್ಕಮಗಳೂರು ಮಲ್ನಾಡ್ ಸಂಸ್ಥೆಯ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ…

213
firstsuddi

ಚಿಕ್ಕಮಗಳೂರು : ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ ಎನ್ನುವ ತರಬೇತಿ ಶಿಬಿರವನ್ನು ಜೆ.ಸಿ.ಐ ಚಿಕ್ಕಮಗಳೂರು ಮಲ್ನಾಡ್ ಸಂಸ್ಥೆಯ ವತಿಯಿಂದ ಬೀಕನಹಳ್ಳಿ ಮೊರಾರ್ಜಿ ಶಾಲೆಯ ಮಕ್ಕಳಿಗೆ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ತರಬೇತುದಾರರಾದ ವಿಜಯ್ ಕುಮಾರ್ ರವರು ಮಕ್ಕಳಿಗೆ ತರಬೇತಿ ನೀಡಿದರು. ಇದೇ ವೇಳೆ ಜೆ.ಸಿ.ಐ ಚಿಕ್ಕಮಗಳೂರು ಮಲ್ನಾಡ್ ಸಂಸ್ಥೆಯ ಜೆ.ಸಿ ಅಧ್ಯಕ್ಷರಾದ ವಿಜಯ್ ಕುಮಾರ್, ಕಾರ್ಯದರ್ಶಿ ಜೆ.ಸಿ ನೀತನ್ ಡಿಸೋಜಾ, ಗಿರೀಧರ್ ಮುಂತಾದವರು ಉಪಸ್ಥಿತರಿದ್ದರು.