ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ” ಎಂದು ಸಿಎಂ ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ.










