ಬೆಳಗಾವಿ(ಚಿಕ್ಕೋಡಿ) : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಅನೇಕ ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇದೀಗ ಡಿಸಿಎಂ ಲಕ್ಷ್ಮಣ್ ಸವದಿ ಅವರ ಅಣ್ಣನ ಮಗ ಕೂಡ ಕೊರೊನಾಗೆ ಬಲಿಯಾಗಿದ್ದಾರೆ.
ಲಕ್ಷ್ಮಣ ಸವದಿಯವರ ಅಣ್ಣ ಪರಪ್ಪ ಸವದಿಯವರ ಮಗ ವಿನೋದ್ ಸವದಿ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಕಳೆದ ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. pic.twitter.com/tVQm8TTyiX
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) May 12, 2021










