ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಅವರಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಇಂದು ಪ್ರಕಟಿಸಿದ್ದಾರೆ.
ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.










