ಕದಂಬ ರಾಜವಂಶಸ್ಥ ರವಿವರ್ಮನ ಕಾಲದ ಶಾಸನ ಪತ್ತೆ…

68
firstsuddi

ಶಿವಮೊಗ್ಗ : ಕದಂಬ ರಾಜವಂಶಸ್ಥನಾದ ರಾಜ ರವಿವರ್ಮನ ಕಾಲದ ಕಲ್ಲಿನ ಶಾಸನ ಜಿಲ್ಲೆಯ ಸೊರಬ ತಾಲೂಕು ತಲಗುಂದ ಗ್ರಾಮದ ರಾಮೇಶ್ವರ ದೇವಾಲಯದ ಬಳಿ ಪತ್ತೆಯಾಗಿದೆ.

ಈ ಕಲ್ಲಿನ ಶಾಸನವು 143 ಸೆ.ಮೀ ಉದ್ದ ಹಾಗೂ 49 ಸೆ.ಮೀ ಅಗಲವಿದ್ದು, ಬ್ರಾಹ್ಮಿ ಲಿಪಿ ಹಾಗೂ ಸಂಸ್ಕೃತ ಭಾಷೆಯ ಏಳು ಸಾಲಿನಿಂದ ಕೊಡಿದೆ. ಶಾಸನವು ಅಲ್ಲಲ್ಲಿ ಸ್ವಲ್ಪ ಒಡೆದು ಹೋಗಿದೆ. ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಆರ್. ಶೇಜೇಶ್ವರ ಈ ಶಾಸನವನ್ನು ಪತ್ತೆ ಮಾಡಿದ್ದಾರೆ.

ಶಾಸನದ ಸಾರಾಂಶ : ಈ ಶಾಸನವು ಹಾರಿತಿಯ ಪುತ್ರರಾದ ಮಾನವ್ಯಸ ಅಧಿಪತಿಯಾದ ರವಿವರ್ಮನು ದೇವತೆಗಳಿಂದ ಪೂಜಿಸಲ್ಪಟ್ಟು ಮುಚ್ಚುಂಡಿಯ ಗ್ರಾಮದಲ್ಲಿ ಆರನೇ ಒಂದು ಭಾಗವನ್ನು ದಾನವನ್ನಾಗಿ ನೀಡಿದ್ದಾರೆ. ದಾನ ನೀಡಿದ ಗ್ರಾಮವು ಶಿಕಾರಿಪುರ. ಕ್ರಿ.ಶ 5-6 ನೇ ಶತಮಾನದ್ದಾಗಿದೆ.

ಕದಂಬ ರವಿವರ್ಮನಿಗೆ ಸಂಬಂಧಿಸಿದಂತೆ ಇದುವರೆಗೂ 10 ಶಾಸನಗಳು ಮಾತ್ರ ದೂರೆತಿದೆ. ಈಗ ದೂರೆತಿರುವ ಶಾಸನವು ಸೇರಿ 11 ಶಾಸನಗಳಾಗಿವೆ. ರವಿವರ್ಮ ಬನವಾಸಿಯನ್ನು ರಾಜಧಾನಿಯಾಗಿ ಮಾಡಿಕೊಂಡು ಕ್ರಿ.ಶ 485 ರಿಂದ ಕ್ರಿ.ಶ 519 ರ ವರೆಗೂ 34 ವರ್ಷಗಳ ಕಾಲ ಆಡಳಿತ ನಡೆಸಿದ್ದಾನೆ.