ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ: ಸಚಿವ ನಾಗೇಶ್.

50
firstsuddi

ಬೆಂಗಳೂರು : ಧರ್ಮಗುರುಗಳ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ಧರ್ಮಾತೀತವಾಗಿ ಧರ್ಮಗುರುಗಳು ಸಹಮತ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮಠಾಧೀಶರು, ಧರ್ಮಗುರುಗಳು, ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಶಾಲಾ ಹಂತದಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದು ಧರ್ಮ ಗುರುಗಳು ಸಲಹೆ ನೀಡಿದ್ದಾರೆ. ಅಲ್ಲದೆ ನೈತಿಕ ಶಿಕ್ಷಣದಲ್ಲಿ ಯಾವ ಯಾವ ಮೌಲ್ಯಯುತ ಅಂಶಗಳು ಸೇರಿಸಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಶ್ರೀಗಳು, ಸಿರಿಗೆರೆ ಶ್ರೀಗಳು, ರವಿಶಂಕರ್ ಗುರೂಜಿ, ಪೇಜಾವರ ಶ್ರೀಗಳು, ಮಾದಾರ ಚೆನ್ನಯ್ಯ ಶ್ರೀಗಳು, ರಾಘವೇಶ್ವರ ಶ್ರೀಗಳು, ಪೀಟರ್ ಮ್ಯಾಚಾರೋ, ಡಾ. ಕಸ್ತೂರಿ ರಂಗನ್, ಅಬ್ದುಲ್ ರಹೀಂ ಸೇರಿ ಹಲವು ಧರ್ಮಗಳ ಧರ್ಮಗುರುಗಳು ಭಾಗವಹಿಸಿ ಅಭಿಪ್ರಾಯ ತಿಳಿಸಿದರು. ಸುಮಾರು 4 ಗಂಟೆಗಳ ಕಾಲ ಸಭೆ ನಡೆದಿದ್ದು, ಎಲ್ಲಾ ಧರ್ಮಗುರುಗಳ ಅಭಿಪ್ರಾಯಗಳನ್ನು ಶಿಕ್ಷಣ ಸಚಿವರು ಪಡೆದರು.

ಸಭೆ ಬಳಿಕ ಸಚಿವ ಬಿಸಿ ನಾಗೇಶ್ ಮಾತನಾಡಿ, ಶ್ರೀಗಳು, ಧರ್ಮಗುರುಗಳ ಅಭಿಪ್ರಾಯ ಪಡೆಯಲಾಗಿದೆ. ನೈತಿಕ ಶಿಕ್ಷಣ ಜಾರಿ ಪ್ರಕ್ರಿಯೆಗೆ ಸಮಿತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.