ಶ್ರೀಕಾಂತ್ ಪೂಜಾರಿ ಮೇಲಿನ ರೌಡಿಶೀಟರ್ ಕೇಸ್‌ಗೆ ಮುಕ್ತಿ ಕೊಟ್ಟಿದ್ದೇ ನಮ್ಮ ಸರ್ಕಾರ: ದಿನೇಶ್ ಗುಂಡೂರಾವ್.

49
firstsuddi

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಮೇಲಿನ ರೌಡಿಶೀಟರ್ ಕೇಸ್‌ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಕೋರ್ಟ್ ಆದೇಶ ಇದ್ದಿದ್ದರಿಂದ ಆತನನ್ನು ಬಂಧಿಸಲಾಗಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶ್ರೀಕಾಂತ್ ಪೂಜಾರಿ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಮಗೆ ಶ್ರೀಕಾಂತ್ ಪೂಜಾರಿ ಯಾರು ಎನ್ನುವುದೇ ಗೊತ್ತಿಲ್ಲ. ಆತನಿಗಾಗಿ ಸುಮ್ಮನೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರದಿಂದ ಬರುವ ಜಿಎಸ್‍ಟಿಯು ಬಂದಿಲ್ಲ, ಆ ಹಣಕ್ಕಾಗಿ ಹೋರಾಟ ಮಾಡಬೇಕು. ಮೋದಿ ಸರ್ಕಾರದಿಂದ ನಮಗೆ ಅನ್ಯಾಯ ಆಗಿದೆ ಎಂದು ಅವರು ಕುಟುಕಿದ್ದಾರೆ.

ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ಸಂತೋಷದ ವಿಚಾರವಾಗಿದೆ. ಪ್ರತಿ ಗ್ರಾಮದಲ್ಲೂ ರಾಮ ಮಂದಿರ ಇವೆ, ಹಿಂದುತ್ವ ಒಬ್ಬರ ಆಸ್ತಿ ಅಲ್ಲ. ಹಿಂದುತ್ವಕ್ಕೆ ಅನೇಕ ಇತಿಹಾಸ ಇದೆ. ಹಿಂದುತ್ವ ಯಾವ ಪಕ್ಷದ ಆಸ್ತಿಯೂ ಅಲ್ಲ ಎಂದಿದ್ದಾರೆ.

ಕೋವಿಡ್ ವಿಚಾರವಾಗಿ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ. ಸಹಜವಾಗಿ ಸ್ವಲ್ಪ ಕೇಸ್ ಜಾಸ್ತಿ ಆಗಿವೆ. ಸುಮಾರು 7 ಸಾವಿರ ಟೆಸ್ಟಿಂಗ್ ಮಾಡುತ್ತಿದ್ದೇವೆ. ಈ ಬಗ್ಗೆ ಜನ ಆತಂಕ ಪಡುವ ಅಗತ್ಯ ಇಲ್ಲ. ಸ್ವಲ್ಪ ವಯಸ್ಸಾದವರು ಹಾಗೂ ಬೇರೆ ಅನಾರೋಗ್ಯ ಸಮಸ್ಯೆ ಇದ್ದವರು ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.