ಸಿಎಂ ನಿವಾಸಕ್ಕೆ 9 ಕೋಟಿ, ರೈತರ ಬರ ಪರಿಹಾರಕ್ಕೆ ಬರೀ 2 ಸಾವಿರ: ಆರ್.ಅಶೋಕ್.

50
firstsuddi

ಬೆಂಗಳೂರು: ಸಿಎಂ ನಿವಾಸ ಕಾವೇರಿ ನವೀಕರಣಕ್ಕೆ 9 ಕೋಟಿ ವೆಚ್ಚ ಮಾಡಿದ್ದು, ರೈತರಿಗೆ ಬರ ಪರಿಹಾರಕ್ಕೆ ಬರೀ 2 ಸಾವಿರ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಿಎಂ ಬಂಗಲೆಗೆ ನವಕೋಟಿ ಸಿಂಗಾರ ಮಾಡಿದ್ದಾರೆ. ರೈತರಿಗೆ ಬರ ಪರಿಹಾರ ನೀಡಲು ಹಣವಿಲ್ಲ ಎಂದು ಕೈಚೆಲ್ಲಿ ಕೂತಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ಬಂಗಲೆ ನವೀಕರಣಕ್ಕೆ ಕನ್ನಡಿಗರ ತೆರಿಗೆ ಹಣದಲ್ಲಿ 9 ಕೋಟಿ ರೂ. ಉಡೀಸ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ಬಾಯಿ ಬಿಟ್ಟರೆ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಬುರುಡೆ ಬಿಡುವ ಮಜಾವಾದಿ ಸಿದ್ದರಾಮಯ್ಯನವರೇ ರಾಜ್ಯದ ಜನತೆ ಭೀಕರ ಬರ, ಸಾಲದ ಹೊರೆ, ಅಭಿವೃದ್ಧಿ ಶೂನ್ಯತೆಯಿಂದ ಸೊರಗುತ್ತಿರುವ ಪರಿಸ್ಥಿತಿಯಲ್ಲಿ ಇಂತಹ ಶೋಕಿ ಬೇಕಿತ್ತಾ ಎಂದು ಪ್ರಶ್ನಿಸಿದರು.