ನವದೆಹಲಿ: ನಾನು ಸ್ಪರ್ಧೆ ಮಾಡಬೇಕು ಅನ್ನೋದಕ್ಕಿಂತ ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಬೇಸ್ ಉಳಿಯುತ್ತದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಂಡ್ಯ ಲೋಕಸಭೆ ಕ್ಷೇತ್ರದ ಬಗ್ಗೆ ಸುಮಲತಾ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ನಿಶ್ಚಿಂತೆಯಾಗಿರಿ, ಏನೂ ನಿರ್ಧಾರ ಆಗಿಲ್ಲ ಎಂದು ನಡ್ಡಾ ಹೇಳಿದ್ದಾರೆ. ನಿಮ್ಮಂತ ನಾಯಕಿ ಪಕ್ಷಕ್ಕೆ ಬೇಕು ಎಂದಿದ್ದಾರೆ. ಇಂದು ಸಿಇಸಿ ಮೀಟಿಂಗ್ ಆಗುತ್ತದೆ. ಬಳಿಕ ಅಂತಿಮ ನಿರ್ಧಾರ ತಿಳಿಸುವುದಾಗಿ ನಡ್ಡಾ ಹೇಳಿದ್ದಾರೆ ಎಂದರು.










