ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ಚುರುಕುಗೊಂಡಿದ್ದು ಈಗ ಬೈರತಿ ಸುರೇಶ್ ಅವರ ಸಚಿವಾಲಯದ ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ. ವಿಧಾನಸೌಧದ ನಗಾರಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ನೋಟಿಸ್ ನೀಡಿದ ಇಡಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸಮನ್ಸ್ ನೀಡಿದ ಇಡಿ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.










