ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಖರ್ಗೆ ಸುಳಿವು.

36

ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮಹತ್ವದ ಸುಳಿವು ನೀಡಿದ್ದಾರೆ. ಇಂದು ಕಲಬುರಗಿಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಸಾಧ್ಯವಾಗುವುದಿಲ್ಲ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು 8 ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.