ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಕಂದಕಕ್ಕೆ ಉರುಳಿದ ಮಿನಿ ಬಸ್‌…

295
firstsuddi

ಜಮ್ಮು :ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ಸೊಂದು ​ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಕೆಸ್ವಾನ್​ ಪ್ರದೇಶದಿಂದ ಕಿಶ್ತ್ವಾರ್ ಜಿಲ್ಲೆಗೆ ತೆರಳುತ್ತಿದ್ದ ಮಿನಿ ಬಸ್​ ಚಾಲಕನ ನಿಯಂತ್ರಣ ಕಳೆದುಕೊಂಡು​ ಥಕ್ರಾಯ್​ ಬಳಿ ದಂಡಾರಣ್​ನಲ್ಲಿರುವ ಸುಮಾರು 300 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದ್ದು, ಮಿನಿ ಬಸ್​ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಇದರಲ್ಲಿ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.   ಘಟನೆ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಧನವನ್ನು, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕಿಸ್ತ್ವಾರ್ ಜಿಲ್ಲೆಯ ಉಪ ಕಮಿಷನರ್ ಅಂಗ್ರೆಜ್ ಸಿಂಗ್ ರಾಣಾ ಘೋಷಿಸಿದ್ದಾರೆ.