ಮೂಡಿಗೆರೆ:ಅಕ್ರಮ ಮರಳು ಅಡ್ಡೆ ಮೇಲೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ, ಟ್ರಾಕ್ಟರ್ ಸೇರಿದಂತೆ ಮೂವರ ಬಂಧನ…

708
firstsuddi

ಮೂಡಿಗೆರೆ: ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಟ್ರಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ತಾಲೂಕಿನ ಬೈರದೇವ ಗದ್ದೆ ಅರಣ್ಯ ಪ್ರದೇಶ ದಲ್ಲಿ ನಡೆದಿದೆ. ಐದು ವರ್ಷಗಳಿಂದ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟವಾಗುತ್ತಿದ್ದು, ಗ್ರಾಮಸ್ಥರ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಟ್ರಾಕ್ಟರ್ ಸೇರಿದಂತೆ ಮೂವರನ್ನು ಬಂಧನಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.