ಕಲಬುರಗಿ: ವಾಕಿಂಗ್ ಗೆ ತೆರಳುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮಮಂದಿರ ಬಳಿ ನಡೆದಿದೆ. ಕಾರು ಚಾಲಕನಿಗೆ ಪಿಡ್ಸ್ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ವಾಕಿಂಗ್ ಗೆ ತೆರಳುತ್ತಿದ್ದವರ ಮೇಲೆ ಹರಿದಿದೆ. ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತೆಗೆ ದಾಖಲಿಸಲಾಗಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










