ಬೆಂಗಳೂರು:ರೆಹನಾ ಫಾತಿಮಾ ಅವರು ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ವಿರುದ್ಧ ನಟ ಜಗ್ಗೇಶ್ ಅವರು ಕಿಡಿಕಾರಿ ಟ್ವೀಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್.ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳ ಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂದೂ ಧರ್ಮ ಇಂಥವರಿಗಾ? ಜೈಹಿಂದ್ ಎಂದು ಟ್ವೀಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.











