ಇಂದಿನಿಂದ ಎಲ್ಲಾ ರೀತಿಯ ವಾಹನಗಳಿಗೆ ಶಿರಾಡಿಘಾಟ್ ಸಂಚಾರ ಮುಕ್ತ…

223

ಹಾಸನ:ಭಾರಿ ಮಳೆಗೆ ಸಂಪೂರ್ಣ ಅಸ್ಥವ್ಯಸ್ತಗೊಂಡಿದ್ದ ಶಿರಾಡಿ ಘಾಟ್ ರಸ್ತೆ  ಇಂದಿನಿಂದ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಶಿರಾಡಿ ಘಾಟ್ ಮಾರ್ಗದಲ್ಲಿ ಭಾರೀ ವಾಹನ ಸಂಚಾರದ  ಬಗ್ಗೆ ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾಧಿಕಾರಿಗಳೊಂದಿಗೆ  ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ನಡೆಸಿದ್ದು, ಎಲ್ಲಾ ರೀತಿಯ ವಾಹನಗಳ  ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತವಾಗಲಿದೆ ಎಂದು ಸಚಿವ ಯು.ಟಿ.ಖಾದರ್ ಅವರು ಮಾಹಿತಿ ನೀಡಿದ್ದಾರೆ.