ಬೆಳಗಾವಿ :ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಈ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣಾಗೆ ದಿಕ್ಸೂಚಿಯಾಗಿದೆ. ದೇಶಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ಪ್ರತಿಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಇದೀಗ ಮುಖಭಂಗವಾಗಿದೆ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.










