ಬೆಂಗಳೂರು: ವೃದ್ಧೆಯೋರ್ವರ ಕಾಲಿನ ಮೇಲೆ ಬಿಎಂಟಿಸಿ ಬಸ್ ಹರಿದು ವೃದ್ದೆಯ ಎಡಗಾಲಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಕೆ ಆರ್ ಮಾರ್ಕೆಟ್ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆ ನಡೆದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಬಸ್ ಚಾಲಕನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.










