ಉಡುಪಿ: ಕುಮಾರ್ ಬಂಗಾರಪ್ಪ ಅವರ ಮೀ ಟೂ ಹೇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಯಿಸಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಚಾರ ಚರ್ಚೆ ಮಾಡುವುದಿಲ್ಲ. ರಾಜಕೀಯ ವಿಚಾರ ಇದ್ದರೆ ಚರ್ಚೆ ಮಾಡೋಣ. ಕುಮಾರ್ ಬಂಗಾರಪ್ಪ ಅವರ ಅಭಿರುಚಿ ಪ್ರದರ್ಶನವಾಗಿದೆ. ಅವರ ಆರೋಪದ ಬಗ್ಗೆ ನಾನು ಮಾತನಾಡುವುದಿಲ್ಲ. ನನಗೆ ಎಲ್ಲವನ್ನೂ ಎದುರಿಸುವ ಸಾಮರ್ಥ್ಯ ಇದೆ ಎಂದಿದ್ದಾರೆ.










