ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಭೆ…

307
firstsuddi

ಬೆಂಗಳೂರು : ಕಬ್ಬು ಬಾಕಿ ಪಾವತಿ, ಸಾಲಮನ್ನಾ ಸೇರಿದಂತೆ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದು, ಈ ಹಿನ್ನಲೆಯಲ್ಲಿ  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಕಬ್ಬು ಬೆಳೆಗಾರರ ಸಮಸ್ಯೆ ಯನ್ನು ಕುರಿತು ಕಳೆದ ಮಂಗಳವಾರ ಸಭೆ ನಡೆಸಿದ್ದರು. ಇಂದು ಕೂಡ  ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30ಕ್ಕೆ ಸಭೆ ನಡೆಯಲಿದೆ.