ಬೆಳಗಾವಿ: ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪರವರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸೊಕ್ಕಿನಿಂದ ದುರಹಂಕಾರದಿಂದ ಮಾತನಾಡುವುದನ್ನು ಬಿಡಬೇಕು. ಸಿಎಂ ನಮ್ಮ ಬಗ್ಗೆಯೂ ಹಗುರವಾಗಿ ಮಾತನಾಡಿದ್ದಾರೆ. ವಿರೋಧ ಪಕ್ಷ ಅಂದ್ರೆ ಜೀತದಾಳು ಅಂದುಕೊಂಡಿದ್ದಾರಾ? ಉತ್ತರ ಕರ್ನಾಟಕ ಅಭಿವೃದ್ಧಿ ಕೆಲಸದಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










