ದೆಹಲಿ : ನಿನ್ನೆಯಿಂದ ಆರಂಭವಾಗಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ ಇಂದು ಸಹ ಮುಂದುವರೆದಿದ್ದು, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಯೋಧ್ಯೆ ಬೇಡ ಮೊದಲು ಸಾಲಮನ್ನಾ ಮಾಡಿ ಎಂದು ರೈತರು ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಿಂದ ರೈತರು ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಮ್ ಲೀಲಾ ಮೈದಾನದ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ.










