ಬೆಂಗಳೂರು:63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ. ದುಬೈನ ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದ್ದು. ಅಲ್ಲಿನ ಕನ್ನಡ ಸಂಘವೊಂದು ಆಯೋಜನೆ ಮಾಡಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಟ ದರ್ಶನ್ ಹಾಗೂ ನಟ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗಿಯಾಗಿದ್ದರು.ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.












