ಬೆಂಗಳೂರು: ಇಂದು ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಉಪಹಾರ ಕೂಟವನ್ನು ಏರ್ಪಡಿಸಿದ್ದು, ಉಪಹಾರ ಕೂಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ ಕೆ ಶಿವಕುಮಾರ್ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದರು.










