ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ಕರೆದೊಯ್ಯಲಾಗಿದ್ದು, ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಲು ಸಿದ್ಧತೆ ನಡೆದಿದೆ. ಡಾ. ಮೊಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ.










