ಹಾಸನ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಾಸನ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ ಎಚ್.ಎಸ್.ಪ್ರಕಾಶ ಅವರು ನಾಲ್ಕು ಬಾರಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು.










