ಬೆಂಗಳೂರು:ಕಿಂಗ್ ಪಿನ್ಗಳ ಕುರಿತಾಗಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ ನಿನ್ನೆ ಸಿಎಂ ಬಹಳ ಹಗುರವಾಗಿ ಮಾತಾಡಿದ್ದಾರೆ. ಯಡಿಯೂರಪ್ಪ ಯಾವತ್ತೂ ಬೇರೆ ಪಕ್ಷಗಳ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಕುಮಾರಸ್ವಾಮಿ ಸುತ್ತಮುತ್ತ ಇರುವವರು ರೌಡಿಗಳು, ಕಿಂಗ್ಪಿನ್ಗಳು. ಗೋವಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದವರಿಗೆ ಟಿಕೆಟ್ ನೀಡಿದ್ದು ಯಾಕೆ? ಕ್ರಿಮಿನಲ್ಗಳಿಗೆ ಟಿಕೆಟ್ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದರು. 10 ಜನ ಬಿಜೆಪಿ ಶಾಸಕರು ಸಂಪರ್ಕದಲ್ಲಿ ಇದ್ದಾರೆ ಎನ್ನುತ್ತಿರಲ್ಲಾ ಒಂದು ಹೆಸರು ಬಹಿರಂಗ ಪಡಿಸಿ ನಾನು ಸವಾಲು ಹಾಕುತ್ತೇನೆ ಎಂದಿದ್ದಾರೆ.










