ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರಿಗೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರ ಬೆಂಬಲಿಗರು, ಡಿಎಂಕೆ ಕಾರ್ಯಕರ್ತರು ಆತಂಕಗೊಂಡಿದ್ದು ಡಿಎಂಕೆ ಕಾರ್ಯಕರ್ತರು ಅಪಾರ ಪ್ರಮಾಣದಲ್ಲಿ ಆಸ್ಪತ್ರೆಯ ಮುಂದೆ ಜಮಾಯಿಸಿದ್ದು ಕರುಣಾನಿಧಿಯವರ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಅವರು, ಪೋ … ಪೋ… ಯಮರಾಜ ಎಂದು ಪ್ರಾರ್ಥಿಸುತ್ತಾ ಕಣ್ಣೀರಿಡುತ್ತಿದ್ದಾರೆ.










