ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕರ್ನಾಟಕ ಬ್ಯಾಂಕ್ ನ ಎಟಿಎಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎಟಿಎಂ ಮಿಷನ್ ಗೆ ಬೆಂಕಿ ತಗುಲುವ ಮುನ್ನ ಬ್ಯಾಂಕ್ ಸಿಬ್ಬಂದಿ ಎಚ್ಚೆತ್ತು ಬೆಂಕಿಯನ್ನು ನಂದಿಸಿದ್ದಾರೆ. ಎಟಿಎಂ ಕಚೇರಿಯ ಬ್ಯಾಟರಿ,ಬೋರ್ಡ್ ಸೇರಿದಂತೆ ಕೆಲವೊಂದು ವಸ್ತುಗಳು ಹಾನಿಯಾಗಿವೆ .









