ಬಳ್ಳಾರಿ: ಒಂದೇ ಮರಕ್ಕೆ ವಿವಾಹಿತೆ ಹಾಗೂ ವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೂಡ್ಲಿಗಿಯ ಹುರಳಿಹಾಳು ಗ್ರಾಮದಲ್ಲಿ ನಡೆದಿದೆ. ವಿವಾಹಿತೆ ಶೋಭಿತಾ(21), ಅವಿವಾಹಿತ ತಿಪ್ಪೇಸ್ವಾಮಿ(23) ಇಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಶೋಭಿತಾ ಹಾಗೂ ತಿಪ್ಪೇಸ್ವಾಮಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಗುಡೇಕೋಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










